|
Shastriya Bhashe Horatakke Rutusu |
|
|
Written by jayashree
|
|
ಬೆಂಗಳೂರು: ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಬೇಕು ಎನ್ನುವ ಹೋರಾಟ ದಿನೇದಿನೇ ಬೃಹತ್ ರೂಪ ಪಡೆಯುತ್ತಿದೆ. ಕನ್ನಡಪರ ಕಾರ್ಯಕರ್ತರ ಆಕ್ರೋಶಕ್ಕೆ ಮಂಗಳವಾರ ಕೇಂದ್ರ ಸರ್ಕಾರದ ಕಚೇರಿಗಳು ಗುರಿಯಾಗಿವೆ.
ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಂಗಳವಾರ ಮುಂಜಾನೆ ಕೋರಮಂಗಲದ ಕೇಂದ್ರಿಯ ಸದನಕ್ಕೆ ಮುತ್ತಿಗೆ ಹಾಕಿ ಹಿಂದಿ ಭಾಷೆಯಲ್ಲಿದ್ದ ನಾಮಫಲಕಗಳನ್ನು ಜಖಂಗೊಳಿಸಿದರು. ಅಲ್ಲದೆ, ಮುಂಭಾಗದ ಪ್ರವೇಶದ್ವಾರಕ್ಕೆ ಬೀಗ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು, ಪೊಲೀಸರು ಕಣ್ಣು ತಪ್ಪಿಸಿ ಕೇಂದ್ರೀಯ ಸದನದ ಆವರಣ ಪ್ರವೇಶಿಸಲು ಯತ್ನಿಸಿದರು. ಅಲ್ಲದೆ, ಹಿಂದಿ ಭಾಷೆಯಲ್ಲಿದ್ದ ನಾಮಫಲಕವನ್ನು ಕಿತ್ತು ಹಾಕಿ ಕನ್ನಡಪರ ಘೋಷಣೆಗಳನ್ನು ಕೂಗಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣ ಗೌಡ, ತಮಿಳುನಾಡಿನ ಪ್ರತಿನಿಧಿಗಳಾಗಿ ಕೇಂದ್ರ ಸರ್ಕಾರ ವರ್ತಿಸುವುದು ಸರಿಯಲ್ಲ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವ ತನಕ ಕೇಂದ್ರ ಸರ್ಕಾರದ ಕಚೇರಿಗಳ ಮೇಲೆ ದಾಳಿ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು. ಇದೇ ವೇಳೆಯಲ್ಲಿ ಕಾರ್ಯ ಕರ್ತರು ರಸ್ತೆಯಲ್ಲಿ ಮಲಗಿ ಪ್ರತಿಭಟಿಸಿದರು.
ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ನಾರಾಯಣಗೌಡ ಸೇರಿದಂತೆ ನೂರ್ಆರು ಕಾರ್ಯಕರ್ತರನ್ನು ಬಂಧಿಸಿ ಆಡುಗೋಡಿ ಸಿಎಆರ್ ಪರೇಡ್ ಮೈದಾನದಲ್ಲಿರಿಸಿ ಮಧ್ಯಾಹ್ನ ಬಿಡುಗಡೆ ಮಾಡಿದರು.
ಸಂಗ್ರಹ:http://www.kannadaprabha.com
|